ಕಾರವಾರ: ಸಂತ ಸೇವಾಲಾಲ್ ಅವರು ಬಂಜಾರ ಸಮುದಾಯಕ್ಕೆ ಸ್ವಾಭಿಮಾನದ ಬದುಕು ಮತ್ತು ಸಾಮಾಜಿಕ ಸಮಾನತೆಯನ್ನು ಕಲಿಸಿದ ಮಹಾನ್ ಸಂತ ಎಂದು ಶಾಸಕ ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ ಸೈಲ್ ಹೇಳಿದರು.
ಅವರು ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಮಹಾನಾಯಕ ತಾಂಡ, ಶ್ರೀ ಸೇವಾಲಾಲ ಆವರಣ, ಸೀತಾ ನಗರ ಬಿಣಗಾದಲ್ಲಿ ನಡೆದ ಶ್ರೀ ಸಂತ ಸೇವಲಾಲ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.


ಸಂತ ಸೇವಲಾಲ ಅವರು ಬಂಜಾರ ಸಮುದಾಯದ ಆರಾಧ್ಯ ದೈವ, ಆಧ್ಯಾತ್ಮಿಕ ಗುರು ಮತ್ತು ಸಮಾಜ ಸುಧಾರಕರಾಗಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಇವರನ್ನು ಪೂಜಿಸಲಾಗುತ್ತದೆ. ಇವರು ಸತ್ಯ, ಅಹಿಂಸೆ, ಬ್ರಹ್ಮಚರ್ಯ ಮತ್ತು ವ್ಯಸನ ಮುಕ್ತ ಜೀವನವನ್ನು ಬೋಧಿಸಿದರು ಹಾಗೂ ಎಲ್ಲರೂ ಶಿಕ್ಷಿತರಾಗಿ ಅಕ್ಷರ ಜ್ಞಾನವನ್ನು ಪಡೆದು ಜಗತ್ತಿಗೆ ದಾರಿ ದೀಪವಾಗಬೇಕು ಎಂದು ಶಿಕ್ಷಣದ ಮಹತ್ವವನ್ನು ಸಾರಿದ್ದರು ಎಂದರು.
ಸಂತ ಸೇವಲಾಲ ಕುರಿತು ಅನಿ ಪವಾರ ಉಪನ್ಯಾಸ ನೀಡಿದರು. ತಹಲ್ದಾರ ನಿಶ್ಚಲ್ ನರೋನ್ಹ, ಚುನಾವಣೆ ಶಾಖೆಯ ತಹಶೀಲ್ದಾರ ಪ್ರಮೋದ ನಾಯ್ಕ, ಬಂಜಾರ ಸಂಘದ ಅಧ್ಯಕ್ಷ ಸತೀಶ್ ನಾಯ್ಕ ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ಎಂ ನಾಯ್ಕ ಸ್ವಾಗತಿಸಿದರು.



