ಉಡುಪಿ: ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ದೇಶದಲ್ಲಿ ಪ್ರತಿವರ್ಷ 41 ದಶಲಕ್ಷ ಯುನಿಟ್ ರಕ್ತದ ಕೊರತೆ ಎದುರಾಗುತ್ತಿದೆ ಎಂದು ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್ ಅವರು ಹೇಳಿದರು.
ಕರ್ಣಾಟಕ ಬ್ಯಾಂಕ್ ಉಡುಪಿ ವಲಯ ಕಚೇರಿ ವತಿಯಿಂದ ಬ್ಯಾಂಕ್ 102 ನೇ ಸಂಸ್ಥಾಪಕರ ದಿನದ ಅಂಗವಾಗಿ ಜಿಲ್ಲಾಸ್ಪತ್ರೆ ರಕ್ತ ನೀಧಿ ಕೇಂದ್ರ ಮತ್ತು ಜಿಲ್ಲಾ ಆಸ್ಪತ್ರೆ ಎನ್. ಸಿ. ಡಿ ವಿಭಾಗ ಮತ್ತು ಗಾಂಧಿ ಆಸ್ಪತ್ರೆಯ ಆಶ್ರಯದಲ್ಲಿ ನಡೆದ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.

ರಕ್ತದಾನ ಮಹಾನ್ ದಾನ, ಎಲ್ಲ ದಾನಗಳಲ್ಲಿ ರಕ್ತದಾನ ಶ್ರೇಷ್ಠವಾದ ದಾನ. ತುರ್ತು ರಕ್ತದ ಅಗತ್ಯ ಇರುವವರಿಗೆ ಸಮಯಕ್ಕೆ ಸರಿಯಾಗಿ ರಕ್ತ ಸಿಗದೇ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು, ಅಪಘಾತದ ಗಾಯಾಳುಗಳು ಮೃತಪಡುತ್ತಿದ್ದಾರೆ. ಅಮೂಲ್ಯ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತೀ ಅಗತ್ಯ ಆಗಿದ್ದು, ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವಂತೆ ಅವರು ಕರೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಬ್ಯಾಂಕ್ ನಿದರ್ಶಕ ಬಾಲಕೃಷ್ಣ ಹಲಸೆ, ರಕ್ತ ದಾನದಲ್ಲಿ ಪಾಲ್ಗೊಂಡು ಅಗತ್ಯ ಇದ್ದವರಿಗೆ ನೆರವಾಗುವ ಸಾಮಾಜಿಕ ಕಾರ್ಯದಲ್ಲಿ ಬ್ಯಾಂಕ್ ಜತೆಗೆ ಕೈ ಜೋಡಿಸಬೇಕು ಎಂದರು
ಗಾಂಧಿ ಆಸ್ಪತ್ರೆಯ ಮಖ್ಯಸ್ಥ ಡಾ.ಹರೀಶ್ ಚಂದ್ರ ಅವರು ಮಾತನಾಡಿ, ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ತಪ್ಪು ಕಲ್ಪನೆಗಳಿದ್ದು, ಅದನ್ನು ಹೋಗಲಾಡಿಸಬೇಕು. ಹೆಚ್ಚು ಜನರು ಸೇರುವ ಕೇಂದ್ರಗಳಲ್ಲಿ ನಿಯಮಿತವಾಗಿ ರಕ್ತದಾನ ಶಿಬಿರ ಆಯೋಜಿಸಬೇಕು. ಈ ಮೂಲಕ ಜನರಲ್ಲಿ ಅರಿವು ಮುಡಿಸಬೇಕು ಎಂದರು.

ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿ ಸಹಾಯಕ ಮಹಾಪ್ರಭಂದಕ ಮತ್ತು ವಲಯ ಮಖ್ಯಸ್ಥ ರಮೇಶ್ ವೈದ್ಯ ಅವರು ಮಾತನಾಡಿ, ತುರ್ತು ಪರಿಸ್ಥಿತಿಗಳಲ್ಲಿ ರಕ್ತದ ಅಗತ್ಯ ಇದ್ದಾಗ ನಾವು ನಂಬುವುದು ನಮ್ಮಲ್ಲಿರುವ ಉತ್ತಮ ಬ್ಲಡ್ ಬ್ಯಾಂಕ್ ವ್ಯವಸ್ಥೆಗಳನ್ನು. ರಕ್ತದಾನ ವಾಡುವುದರಿಂದ ನಾವು ಇನ್ನೊಬ್ಬರ ಜೀವ ಉಳಿಯಲು ಕಾರಣ ಆಗುತ್ತೇವೆ. ಕರ್ಣಾಟಕ ಬ್ಯಾಂಕ್ ಎರಡು ವರ್ಷದಿಂದ ರಕ್ತದಾನ ಮತ್ತು ಆರೋಗ್ಯ ಶಿಬಿರವನ್ನು ಆಯೋಜಿಸಿತ್ತ ಬಂದಿದೆ. ಮುಂದಿನ ದಿನಗಳಲ್ಲಿ ಇತಂಹ ಹಲವು ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳುವುದಾಗಿ ಅವರು ಹೇಳಿದರು.
ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿಕೇಂದ್ರದ ಮುಖ್ಯಸ್ಥೆ ಡಾ. ವೀಣಾ ಕುಮಾರಿ ಅವರು ಮಾತನಾಡಿ, ರಕ್ತದಾನ ಮಾಡವಲ್ಲಿ ನಮ್ಮ ಪಾತ್ರ ಏನು ಯಾರು ರಕ್ತದಾನ ಮಾಡಬಹುದು ಎಂದು ಸಂಕ್ಷಿಪ್ತವಾಗಿ ಉಪನ್ಯಾಸ ನೀಡಿದರು.
ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿದರ್ಶಕ ಡಾ. ವ್ಯಾಸರಾಜ ತಂತ್ರಿ ಅವರು ಮಾತನಾಡಿ, ಜೀವನದ ಬ್ಯಾಂಕ್ ಕರ್ಣಾಟಕ ಬ್ಯಾಂಕ್ ಹಾಗೂ ಜೀವ ಕೊಡುವ ಬ್ಯಾಂಕ್ ರಕ್ತ ನಿಧಿ ಬ್ಯಾಂಕ್ ಎಂದರು
ಉಡುಪಿ ಅಂಬಾಗಿಲಿನಲ್ಲಿ ಇರುವ ಕರ್ಣಾಟಕ ಬ್ಯಾಂಕ್ ಉಡುಪಿ ವಲಯ ಕಚೇರಿಯಲ್ಲಿ ಬುಧವಾರ ಬೆಳಗ್ಗೆ 8.30 ರಿಂದ ಮಧ್ಯಾಹ್ನ 2 ರವರಗೆ ರಕ್ತದಾನ ಶಿಬಿರ ನಡೆಯತು.
ಈ ಶಿಬಿರದಲ್ಲಿ ಉಚಿತ ಮಧುಮೇಹ ಪರೀಕ್ಷೆ ರಕ್ತದೊತ್ತಡ ಪರೀಕ್ಷೆ ,ದಂತ ತಪಾಸಣೆ, ಇಸಿಜಿ ಪರೀಕ್ಷೆ ,ಎಚ್ ಬಿ ಪರೀಕ್ಷೆ , ರಕ್ತ ತಪಾಸಣೆ, ರಕ್ತದಾನ ಹಮ್ಮಿಕೊಳ್ಳಲಾಗಿತ್ತು, ಈ ಶಿಬಿರದಲ್ಲಿ ಕರ್ಣಾಟಕ ಬ್ಯಾಂಕ್ ಎಲ್ಲ ಗ್ರಾಹಕರು, ಸಾರ್ವಜನಿಕರು ಹಾಗೂ ಬ್ಯಾಂಕ್ ನೌಕರರು ಈ ಉಚಿತ ತಪಾಸಣೆ ಸೌಲಭ್ಯ ಪಡೆದುಕೊಂಡರು.
ಕರ್ಣಾಟಕ ಬ್ಯಾಂಕ್ ಸಿಬ್ಬಂದಿ ಇದ್ದರು. ಕರ್ಣಾಟಕ ಬ್ಯಾಂಕ್ ಮಖ್ಯಪ್ರಭಂದಕ ಸುಬ್ರಹ್ಮಣ್ಯ ಬಾರ್ವೆ ಸ್ವಾಗತಿಸಿ ನಿರೂಪಿಸಿದರು. ಈ ಶಿಬಿರದಲ್ಲಿ 50 ಮಂದಿ ರಕ್ತದಾನ ಮಾಡಿದರು. 56 ಮಂದಿ ಇಸಿಜಿ ಪರೀಕ್ಷೆ ಹಾಗೂ 40 ಮಂದಿ ದಂತ ಪರೀಕ್ಷೆ, 67 ಮಂದಿ ಮಧುಮೇಹ ಪರೀಕ್ಷೆ ಮತ್ತು ರಕ್ತದೊತ್ತಡ ಪರೀಕ್ಷೆ ಮಾಡಿಸಿಕೊಂಡರು.



