ಸಿರಸಿ: ನನ್ನ ಪಕ್ಷನಿಷ್ಠೆ, ಕರ್ತವ್ಯ ಶ್ರದ್ಧೆ ಮತ್ತು ಸಂಘಟನಾ ಶಕ್ತಿ, ರೈತಪರ ಕಾಳಜಿ ಗುರುತಿಸಿ, ನನ್ನನ್ನು ಬಿಜೆಪಿ ಉತ್ತರ ಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷನನ್ನಾಗಿ ನೇಮಕ ಮಾಡಿ ಜಿಲ್ಲಾ ಘಟಕದ ಅಧ್ಯಕ್ಷ ಎನ್ ಎಸ್ ಹೆಗಡೆ ಅವರು ಆದೇಶ ಹೊರಡಿಸಿದ್ದು ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಬಿಜೆಪಿ ಉತ್ತರ ಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸದಾ ನನ್ನನ್ನು ಹುರಿದುಂಬಿಸಿ ಬೆಂಬಲಿಸುತ್ತಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ, ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರಿಗೆ, ರಾಜ್ಯ ರೈತಮೋರ್ಚಾ ಅಧ್ಯಕ್ಷ ಎ. ಎಸ್. ಪಾಟೀಲ ನಡಹಳ್ಳಿ ಹಾಗೂ ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ, ಮಾಜಿ ಸಚಿವರಾದ ಸುನೀಲ್ ಕುಮಾರ ಕಾರ್ಕಳ, ಹರತಾಳು ಹಾಲಪ್ಪ, ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್ ನಾಯ್ಕ. ಕುಮಟಾ ಶಾಸಕ ದಿನಕರ ಕೆ. ಶೆಟ್ಟಿ, ಮಾಜಿ ಶಾಸಕರಾದ ಸುನೀಲ ನಾಯ್ಕ, ಸುನಿಲ್ ಹೆಗಡೆ ಅವರು, ರಾಜ್ಯ ಕಾರ್ಯಕಾರಿಣಿ ಸದಸ್ಯರಾಜ ಕೆ.ಜಿ. ನಾಯ್ಕ ಮತ್ತು ಪಕ್ಷದ ಜಿಲ್ಲೆಯ ಎಲ್ಲ ಪ್ರಧಾನ ಕಾರ್ಯದರ್ಶಿ, ನಿಕಟಪೂರ್ವ ಅಧ್ಯಕ್ಷ ರಮೇಶ ನಾಯ್ಕ ಕುಪ್ಪಳ್ಳಿ, ಜಿಲ್ಲಾ ಕೋರ್ ಕಮಿಟಿ ಸದಸ್ಯರು, ಎಲ್ಲ ಮಂಡಳ ಅಧ್ಯಕ್ಷರು, ಸಮಸ್ತ ಕಾರ್ಯಕರ್ತರು, ಹಿತೈಷಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
ನಿರಂತರ ಹೋರಾಟದಿಂದ ಗುರುತಿಸಿಕೊಂಡ ನಾನು ಪಕ್ಷ ನೀಡಿದ ಹುದ್ದೆಗೆ ನ್ಯಾಯ ಒದಗಿಸುವುದರ ಜತೆಗೆ ಜಿಲ್ಲೆಯ ರೈತಪರ, ಪಕ್ಷದ ಕಾರ್ಯಕರ್ತರ ಪರ, ನೊಂದವರ ಪರ, ನ್ಯಾಯದ ಪರ ಧ್ವನಿಯಾಗಿ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.



