ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕಿನ ಬೆಳಗಾಲಪೇಟೆ ಬಳಿ ನಡೆದ ಭೀಕರ ರಸ್ತೆ ಅಪಘಾತ ದಲ್ಲಿ ಕಾಸರಗೋಡಿನ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಸ್ಸಿಗೆ ಹಿಂಭಾಗದಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.
ಕಾರಿನಲ್ಲಿದ್ದರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತರನ್ನು ಕಾಸರಗೋಡು ಜಿಲ್ಲೆಯ ತಳಂಗರೆಯ ಮುಹಮ್ಮದ್ (65) ಹಾಗೂ ಪತ್ನಿ ಆಯಿಷಾ (62) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಮೃತರ ಪುತ್ರ ಝಿಯಾದ್, ಸೊಸೆ ಹಾಗೂ ಮೊಮ್ಮಕ್ಕಳು ಗಾಯಗೊಂಡಿದ್ದಾರೆ.
ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಸ್ಥಳೀಯರು ಕಾರಿನಲ್ಲಿ ಸಿಲುಕಿದವರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹವನ್ನು ಹಾನಗಲ್ ತಾಲೂಕು ಆಸ್ಪತ್ರೆ ಶವಗಾರದಲ್ಲಿರಿಸಲಾಗಿದೆ.
ಕಾರಿನಲ್ಲಿದ್ದವರು ಹುಬ್ಬಳ್ಳಿಯಿಂದ ಹಾನಗಲ್ ಕಡೆ ಹೊರಟಿದ್ದರು. ಕಾರಿನಲ್ಲಿ 6 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.