ಕರಾವಳಿ ಡೈಲಿನ್ಯೂಸ್ ಡೆಸ್ಕ್
ಕಾಂಗ್ರೆಸ್ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗಂಗಾ ರಾಮ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೇಗನೆ ಗುಣಮುಖರಾಗಲಿ ಎಂದು ಟ್ವಿಟ್ ಮೂಲಕ ಹಾರೈಸಿದ್ದಾರೆ.
ಸೋನಿಯಾ ಗಾಂಧಿ ಅವರು ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದರು. ಇದ್ದಕ್ಕೆ ಸಂಬಂಧಿಸಿದಂತೆ ಮಂಗಳವಾರ ಅನಾರೋಗ್ಯಕ್ಕೆ ಈಡಾಗಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.
ಮಂಗಳವಾರ ಸೋನಿಯಾ ಗಾಂಧಿ ಅವರು ಅನಾರೋಗ್ಯಕ್ಕೆ ಈಡಾಗಿದ್ದರು. ಇದೇ ಕಾರಣಕ್ಕೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾರತ್ ಜೋಡೋ ಯಾತ್ರೆ ಮೊಟಕುಗೊಳಿಸಿ ದೆಹಲಿಗೆ ವಾಪಸ್ ಆಗಿದ್ದರು.