ಕಾರವಾರ: ರಾಜ್ಯ ಕಂದಾಯ ಇಲಾಖೆ ಕಮಿಷನರ್ ಪೊಮ್ಮಲ ಸುನಿಲ್ ಕುಮಾರ್ ಅವರು ಶುಕ್ರವಾರ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ, ಜಿಲ್ಲಾಧಿಕಾರಿ ಕಚೇರಿ ಮತ್ತು ಕಾರವಾರ ಉಪ ವಿಭಾಗಾಧಿಕಾರಿ ಕಚೇರಿಗಳ ಅಭಿಲೇಖಾಲಯಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಅಭಿಲೇಖಾಲಯಗಳಲ್ಲಿ ಕಡತಗಳನ್ನು ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ಸಂರಕ್ಷಿಸಿ ಇಟ್ಟಿರುವುದನ್ನು ಪರಿಶೀಲಿಸಿದ ಅವರು, ಇ- ಅಭಿಲೇಖಾಲಯ ವ್ಯವಸ್ಥೆಯ ಕಾರ್ಯವಿಧಾನಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ನಿರ್ಮಾಣ ಹಂತದಲ್ಲಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್, ಉಪ ವಿಭಾಗಾಧಿಕಾರಿಗಳಾದ ಕನಿಷ್ಕ, ಅಪರ್ಣಾ ರಮೇಶ್, ಡಾ. ನಯನಾ, ಕಲ್ಯಾಣಿ ಇದ್ದರು.