ಉಡುಪಿ (ಶಿರ್ವ): ಉಡುಪಿ ಜಿಲ್ಲೆಯ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಭಾಗ್ಯಶ್ರೀ (16) ಹೃದಯಾಘಾತದಿಂದ ನಿಧನವಾಗಿದ್ದಾಳೆ. ಈಕೆ ಪಳ್ಳಿ ದಾದಬೆಟ್ಟು ಜಯರಾಮ ಆಚಾರ್ಯ ಮತ್ತು ಚಂದ್ರಿಕಾ ಅವರ ಪುತ್ರಿ.
ಬೆಳಿಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆಗೆ ಸ್ಪಂದಿಸದೇ ನಿಧನಳಾಗಿದ್ದಾಳೆ ಎಂದು ತಿಳಿದು ಬಂದಿದೆ.
ಭಾಗ್ಯಶ್ರೀ ನಿಧನಕ್ಕೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕ, ಶಿಕ್ಷಕರು, ವಿದ್ಯಾರ್ಥಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಶಾಲೆಗೆ ರಜೆ ಕೂಡ ನೀಡಲಾಗಿತ್ತು.