Breaking News

ಕಾರವಾರದ ಹಣಕೊಣದಲ್ಲಿ ಉದ್ಯಮಿ ವಿನಾಯಕ ನಾಯ್ಕ ಕೊಚ್ಚಿ ಭೀಕರ ಕೊಲೆ: ಪತ್ನಿ ಗಂಭೀರ

 

 

ಕಾರವಾರ: ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಬೆಳಿಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ.

ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿ ವಿನಾಯಕ ನಾಯ್ಕ (52) ಕೊಲೆಯಾದ ವ್ಯಕ್ತಿ. ಕಾರವಾರ ತಾಲೂಕಿನ ಹಣಕೊಣ ಗ್ರಾಮದ ಮನೆಯಲ್ಲಿ ನಸುಕಿನ ಜಾವ ನಡೆದ ಘಟನೆ ನಡೆದಿದೆ.

  1.  

ಬೆಳಿಗ್ಗೆ ಅಪರಿಚಿತರು ಏಕಾಏಕಿ ಬಂದು ವಿನಾಯಕ ದಂಪತಿ ಮೇಲೆ ಮಚ್ಚಿನಿಂದ ಮನಸೋ ಇಚ್ಚೆ ಹಲ್ಲೆ ನಡೆಸಿದ್ದಾರೆ. ಮಚ್ಚಿನ ಏಟಿಗೆ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕಾರವಾರ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಉದ್ಯಮಿ ವಿನಾಯಕ ನಾಯ್ಕ ತಮ್ಮ ಪತ್ನಿಯೊಂದಿಗೆ ಕಳೆದ ವಾರ ಗ್ರಾಮ ದೇವರ ಜಾತ್ರೆಗೆ ಹಣಕೊಣ ಗ್ರಾಮಕ್ಕೆ ಬಂದಿದ್ದರು.

ಭಾನುವಾರ ಬೆಳಗ್ಗೆ ಪುಣೆಗೆ ಹೊಗುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು. ಅಷ್ಟರಲ್ಲೇ ಕೊಲೆ ನಡೆದಿರುವುದು ಅನುಮಾನ ಹುಟ್ಟಿಸಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಇನ್ನಷ್ಟೇ ತಿಳಿಯಬೇಕಿದ್ದು, ಚಿತ್ತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

  1.  

Leave a Reply

Your email address will not be published. Required fields are marked *