Breaking News

ಸಿಎಂ ಸಿದ್ದರಾಮಯ್ಯಗೆ ಡಬಲ್ ಶಾಕ್, ಲೋಕಾ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ಕೋರ್ಟ್

 

ಬೆಂಗಳೂರು: ಮುಡಾ ಸೈಟ್ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.  ಮಂಗಳವಾರ ಹೈಕೋರ್ಟ್ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಎತ್ತಿ ಹಿಡಿದಿತ್ತು. ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಡಬಲ್ ಶಾಕ್ ನೀಡಿವೆ.

  1.  

ಮೂಡಾ ಹಗರಣ ತನಿಖೆ ನಡೆಸಿ ಡಿ. 24 ರೊಳಗೆ ವರದಿ ಸಲ್ಲಿಸುವಂತೆ ಮೈಸೂರು ಲೋಕಾಯುಕ್ತ ಎಸ್‌ಪಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚನೆ ನೀಡಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ  ಸಂಕಷ್ಟ ಎದುರಾಗಿದೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರದ ಬಗ್ಗೆ ತನಿಖೆ ಅಗತ್ಯ ಇದೆ ಎಂದು ಮೈಸೂರಿನ ಸ್ನೇಹಮಯಿ ಕೃಷ್ಣ ಮತ್ತು ಟಿ.ಜೆ.ಅಬ್ರಾಹಂ ಅವರುಗಳು ಸಲ್ಲಿಸಿದ್ದ ಖಾಸಗಿ ದೂರುಗಳ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು.

  1.  

Leave a Reply

Your email address will not be published. Required fields are marked *