ಬ್ರಹ್ಮಾವರ: ಡಿ. 15ರಿಂದ 17ರವರೆಗೆ ಮಲೇಷಿಯಾದಲ್ಲಿ ನಡೆದ ಅಂತರ ರಾಷ್ಟ್ರೀಯ ವರ್ಲ್ಡ್ ಕ್ಲಬ್ ಥ್ರೋಬಾಲ್ ಚಾಂಪಿಯನ್ ಷಿಪ್ ನಲ್ಲಿ ಭಾರತದ ತಂಡವನ್ನು ಪ್ರತಿನಿಧಿಸಿದ ಎಸ್.ಎಂ.ಎಸ್ ಕಾಲೇಜಿನ ಪ್ರಥಮ ವರ್ಷದ ಬಿ. ಕಾಂ ವಿದ್ಯಾರ್ಥಿನಿ ವೈಷ್ಣವಿ ಜಿ ಸುವರ್ಣ ಪಂದ್ಯಕೂಟದ ಅತ್ಯುತ್ತಮ ಆಟಗಾರ್ತಿಯಾಗಿ ಆಯ್ಕೆಯಾಗಿ ಹೊರಹೊಮ್ಮಿದ್ದಲ್ಲದೆ ಭಾರತೀಯ ತಂಡ ವಿಜಯಗಳಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ಓ. ಎಸ್. ಸಿ ಎಜುಕೇಶನಲ್ ಸೊಸೈಟಿ, ಎಸ್.ಎಂ. ಎಸ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್, ಕಾಲೇಜಿನ ಪ್ರಾಂಶುಪಾಲರಾದ ಡಾ.ಮಂಜುನಾಥ ಉಡುಪ ಕೆ., ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ವೆಂಕಟೇಶ ಭಟ್, ಅಧ್ಯಾಪಕ ವೃಂದ ಹಾಗೂ ಎಲ್ಲಾ ವಿದ್ಯಾರ್ಥಿಗಳು ಹರ್ಷವನ್ನು ವ್ಯಕ್ತಪಡಿಸಿದ್ದಾರೆ
ಪಂದ್ಯಕೂಟಕ್ಕೆ ಭಾರತದಿಂದ ಆಯ್ಕೆಯಾದ 15 ಬಾಲಕಿಯರಲ್ಲಿ ಈಕೆ ಕೂಡ ಒಬ್ಬರು. ಇಷ್ಟೇ ಅಲ್ಲದೆ ಈಗಾಗಲೇ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿರುವುದಲ್ಲದೆ, ಮೂರು ಬಾರಿ ಕರ್ನಾಟಕ ರಾಜ್ಯ ಮಟ್ಟದ ಥ್ರೋಬಾಲ್ ಪಂದ್ಯಕೂಟದಲ್ಲಿ ಪ್ರಥಮ ಸ್ಥಾನವನ್ನು ಪಡೆದ್ದಾರೆ. ಜಾವೆಲಿನ್ ಚಕ್ರ ಎಸೆತ ಗುಂಡು ಎಸೆತದಲ್ಲಿಯೂ ರಾಜ್ಯಮಟ್ಟದಲ್ಲಿ ಬಹುಮಾನವನ್ನು ಪಡೆದುಕೊಂಡಿದ್ದಾರೆ. ಕೋಡಿಬೆಂಗ್ರೆಯ ಗೋವಿಂದ ಸುವರ್ಣ ಹಾಗೂ ಬೇಬಿ ದಂಪತಿ ಪುತ್ರಿ.