ಕಾರವಾರ: ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಹಾಗೂ ಭೀಮಯಾತ್ರೆ ಅಂಗವಾಗಿ ಇದೇ 14 ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಿರಸಿ ಪಟ್ಟಣ , ಸಿರಸಿ ಹೊಸ ಮಾರುಕಟ್ಟೆ, ಹಾಗೂ ಬನವಾಸಿ ಪೋಲಿಸ್ ಠಾಣೆಯ ವ್ಯಾಪ್ತಿಗಳಲ್ಲಿರುವ ಎಲ್ಲ ರೀತಿಯ ಮದ್ಯ ಮಾರಾಟ/ಸಾಗಾಟ ಹಾಗೂ ಮದ್ಯದ ಅಂಗಡಿಗಳನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.





